ನವದೆಹಲಿ: ಮಾಜಿ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಗುರುವಾರ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ (ಎಚ್ಆರ್ಡಿ)ದ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದು, ಎಲ್ಲಾ ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸುವ ಭರವಸೆ ನೀಡಿದ್ದಾರೆ.ಈ ಹಿಂದೆ ಸ್ವತಂತ್ರ ಹೊಣೆಗಾರಿಕೆ ನಿರ್ವಹಿಸುತ್ತಿದ್ದ ಜಾವಡೇಕರ್, ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟ ಪುನಾರಚನೆ ಬಳಿಕ ಕ್ಯಾಬಿನೆಟ್ ಸ್ಥಾನಕ್ಕೆ ಬಡ್ತಿ ಪಡೆದ ಏಕೈಕ ಸಚಿವರಾಗಿದ್ದಾರೆ.ಎಲ್ಲಾ ಸವಾಲುಗಳನ್ನು
ಅವಕಾಶಗಳನ್ನಾಗಿ ಪರಿವರ್ತಿಸಲಾಗುವುದು. ಎಲ್ಲಾ ರಾಜ್ಯ ಸಚಿವಾಲಯಗಳೊಂದಿಗೆ ಸಹಕರಿಸಲಾಗುವುದು. ಹೊಸ ಶಿಕ್ಷಣ ನೀತಿಗಳ ಬಗ್ಗೆ ಸಚಿವಾಲಯದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಜಾವಡೇಕರ್ ಹೇಳಿದ್ದಾರೆ.
Subscribe to:
Post Comments (Atom)
No comments:
Post a Comment